15ನೇ ಮೈಲಿಗಲ್ಲಿನಲ್ಲಿ ರಸ್ತೆ ಅಪಘಾತ-ಸ್ಥಳದಲ್ಲಿ ಬೈಕ್ ಸವಾರ ಸಾವು

ಸುದ್ದಿಲೈವ್. ಕಾಂ/ತೀರ್ಥಹಳ್ಳಿ
ತೀರ್ಥಹಳ್ಳಿ ಹೈವೆ ರಸ್ತೆಯ ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ ಇಂದು ಸಂಜೆ 7-45 ರ ಆಜುಬಾಜಿನಲ್ಲಿ ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
15 ನೇ ಮೈಲಿಗಲ್ಲಿನ ಬಳಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿಯನ್ನ ಮಣಿಕಂಠ(27) ಎಂದು ಗುರುತಿಸಲಾಗಿದೆ. ಎನ್ ಟ್ರಾಕ್ ದ್ವಿಚಕ್ರವಾಹನದಲ್ಲಿ ಸಂಚರಿಸುವಾಗ ಈ ಅವಘಡ ನಡೆದಿದೆ.
ಹೆಲ್ಮಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ಕಾರಣ ತಲೆಗೆ ಬಲವಾದ ಪೆಟ್ಟುಬಿದ್ದು ಮಣಿಕಂಠ ಸ್ಥಳದಲ್ಲಿಯೇ ಅಸುನೀಗಿದ್ದಾರೆ ಎನ್ನಲಾಗಿದೆ. ಮಾಳೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪಿಎಸ್ ಐ ನವೀನ್ ಕುಮಾರ್ ಮಠಪತಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
